ಮಂಗಳೂರು : ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕರ್ನಾಟಕ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್ ಅವರು, ತಮಗೆ ನೀಡಿದ ಯಾವುದೇ ಜವಾಬ್ದಾರಿಯನ್ನು ಸಮರ್ಥವಾಗಿ ಮತ್ತು ಪ್ರಾಮಾಣಿಕವಾಗಿ ನಿಭಾಯಿಸುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ತಾವು ವಿಧಾನಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಸದ್ಯಕ್ಕೆ ಯಾವುದೇ ಬದಲಾವಣೆಗಳು ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಸ್ಪೀಕರ್ ಆಗಿ ತಾವು ಮಾಡಿದ ಕೆಲಸದ ಬಗ್ಗೆ ತಮಗೆ ತೃಪ್ತಿ ಇದೆ ಎಂದು ಹೇಳಿರುವ ಅವರು, ಪಕ್ಷ ಅಥವಾ ಸರ್ಕಾರ ಮುಂದೆ ಯಾವುದೇ ಹೊಸ ಹುದ್ದೆ ನೀಡಿದರೂ ಅದನ್ನು ನಿಷ್ಠೆಯಿಂದ ನಿರ್ವಹಿಸಲು ಸಿದ್ಧರಿರುವುದಾಗಿ ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ : Bangalore : ರಾಜ್ಯಪಾಲರ ಸಂಚಾರಕ್ಕೆ ಝೀರೋ ಟ್ರಾಫಿಕ್; ರಸ್ತೆ ಮಧ್ಯೆ ಕಾರಿನಲ್ಲೇ ಸಿಲುಕಿದ ಗರ್ಭಿಣಿ ಪತ್ನಿ!



