Friday, April 3, 2026
HomeLOCALUdupi : ಇಬ್ಬರು ರೌಡಿಶೀಟರ್‌ಗಳು ಜಿಲ್ಲೆಯಿಂದ ಗಡಿಪಾರು; ಕಾನೂನು ಸುವ್ಯವಸ್ಥೆಗೆ ಕಟ್ಟುನಿಟ್ಟಿನ ಕ್ರಮ!

Udupi : ಇಬ್ಬರು ರೌಡಿಶೀಟರ್‌ಗಳು ಜಿಲ್ಲೆಯಿಂದ ಗಡಿಪಾರು; ಕಾನೂನು ಸುವ್ಯವಸ್ಥೆಗೆ ಕಟ್ಟುನಿಟ್ಟಿನ ಕ್ರಮ!

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸಮಾಜವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ರೌಡಿಶೀಟರ್‌ಗಳನ್ನು ಜಿಲ್ಲೆಯಿಂದ ಗಡಿಪಾರು (Externment) ಮಾಡಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸಿನ ಮೇರೆಗೆ ಜಿಲ್ಲಾಧಿಕಾರಿಗಳು ಈ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಗಡಿಪಾರು ಶಿಕ್ಷೆಗೆ ಒಳಗಾದವರನ್ನು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ವಿಜೇತ ಉದ್ಯಾವರ ಮತ್ತು ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರಿಫ್ ಸಾಹೇಬ್ ಮುದರಂಗಡಿ ಎಂದು ಗುರುತಿಸಲಾಗಿದೆ. ಇವರಿಬ್ಬರ ಮೇಲೆ ಹಲವಾರು ಕ್ರಿಮಿನಲ್ ಪ್ರಕರಣಗಳಿದ್ದು, ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುತ್ತಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಆದೇಶದ ಅನ್ವಯ, ಇವರಿಬ್ಬರೂ ನಿಗದಿತ ಅವಧಿಯವರೆಗೆ ಉಡುಪಿ ಜಿಲ್ಲೆಯ ವ್ಯಾಪ್ತಿಗೆ ಪ್ರವೇಶಿಸುವಂತಿಲ್ಲ. ಒಂದು ವೇಳೆ ಆದೇಶ ಉಲ್ಲಂಘಿಸಿ ಜಿಲ್ಲೆಯೊಳಗೆ ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಸಮಾಜವಿರೋಧಿ ಶಕ್ತಿಗಳ ಅಟ್ಟಹಾಸವನ್ನು ಹತ್ತಿಕ್ಕಲು ಪೊಲೀಸ್ ಇಲಾಖೆ ಕಾರ್ಯತತ್ಪರವಾಗಿದ್ದು, ಈ ಗಡಿಪಾರು ಆದೇಶವು ಇತರ ರೌಡಿಶೀಟರ್‌ಗಳಿಗೆ ಪ್ರಬಲ ಎಚ್ಚರಿಕೆಯ ಸಂದೇಶ ರವಾನಿಸಿದೆ. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಇಂತಹ ಮುನ್ನೆಚ್ಚರಿಕೆ ಕ್ರಮಗಳು ಅಗತ್ಯವೆಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!