Tuesday, May 12, 2026
HomeLOCALShankaranarayana suicide case | ಸಾಲದ ಸುಳಿಗೆ ಸಿಲುಕಿ ಪ್ರಾಣ ಕಳೆದುಕೊಂಡ ವ್ಯಕ್ತಿ: ಶಂಕರನಾರಾಯಣದಲ್ಲಿ ದುರಂತ...

Shankaranarayana suicide case | ಸಾಲದ ಸುಳಿಗೆ ಸಿಲುಕಿ ಪ್ರಾಣ ಕಳೆದುಕೊಂಡ ವ್ಯಕ್ತಿ: ಶಂಕರನಾರಾಯಣದಲ್ಲಿ ದುರಂತ ಅಂತ್ಯ!

ಶಂಕರನಾರಾಯಣ : ಹಿಲಿಯಾಣ ಗ್ರಾಮದ ಕಾರೆಕೊಡ್ಲು ನಿವಾಸಿ ನರಸಿಂಹ ನಾಯ್ಕ್ (44) ಮೃತಪಟ್ಟವರು. ಇವರು ಮದ್ಯಪಾನದ ಚಟವನ್ನು ಹೊಂದಿದ್ದು, ಸುಮಾರು ಒಂದು ವರ್ಷದ ಹಿಂದೆ ಬೈಕ್ ಖರೀದಿಸಲು ಸಾಲ ಮಾಡಿದ್ದಲ್ಲದೆ, ಇತರ ಕಡೆಗಳಲ್ಲೂ ಕೈ ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಈ ಸಾಲ ತೀರಿಸಲು ಕಷ್ಟವಾಗುತ್ತಿರುವ ಬಗ್ಗೆ ಅವರು ಪದೇ ಪದೇ ತಮ್ಮ ಪತ್ನಿ ಜಯಂತಿ ಅವರ ಬಳಿ ಅಳಲು ತೋಡಿಕೊಳ್ಳುತ್ತಿದ್ದರು.


ದುರಂತ ನಡೆದದ್ದು ಹೇಗೆ?


ಏಪ್ರಿಲ್ 30 ರ ರಾತ್ರಿ ಊಟ ಮುಗಿಸಿ ಮನೆಯ ಹಾಲ್‌ನಲ್ಲಿ ಮಲಗಿದ್ದ ನರಸಿಂಹ ನಾಯ್ಕ್, ಮಧ್ಯರಾತ್ರಿ ವೇಳೆ ಕಾಣೆಯಾಗಿದ್ದಾರೆ. ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದಾಗ, ಮನೆಯ ಬಾಗಿಲ ಬಳಿ ಇರುವ ಕಬ್ಬಿಣದ ಪಟ್ಟಿಗೆ ಶಾಲಿನಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಟುಂಬದವರು ತಕ್ಷಣವೇ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದರಾದರೂ, ಪರೀಕ್ಷಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಸಾಲದ ಒತ್ತಡವೇ ಈ ಆತ್ಮಹತ್ಯೆಗೆ ಪ್ರಮುಖ ಕಾರಣವೆಂದು ಶಂಕಿಸಲಾಗಿದ್ದು, ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಪ್ರಗತಿಯಲ್ಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!