Tuesday, May 12, 2026
Homeತಾಜಾ ಸುದ್ದಿAssam CM oath ceremony : ಹಿಮಂತ ಮಂಗಳವಾರ ಎರಡನೇ ಅವಧಿಗೆ ಅಸ್ಸಾಂ ಮುಖ್ಯ ಮಂತ್ರಿಯಾಗಿ...

Assam CM oath ceremony : ಹಿಮಂತ ಮಂಗಳವಾರ ಎರಡನೇ ಅವಧಿಗೆ ಅಸ್ಸಾಂ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ, ನಾಲ್ವರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಗುವಾಹಟಿ : ಹಿಮಂತ ಬಿಸ್ವ ಶರ್ಮಾ ಅವರು ಮಂಗಳವಾರ ಸತತ ಎರಡನೇ ಬಾರಿಗೆ ಅಸ್ಸಾಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಚುನಾವಣಾ ಜಯದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ರಾಜ್ಯದಲ್ಲಿ ಕೇಸರಿ ಪಕ್ಷದ ಬೆಳೆಯುತ್ತಿರುವ ಪ್ರಾಬಲ್ಯವನ್ನು ಇದು ಮತ್ತಷ್ಟು ಗಟ್ಟಿಗೊಳಿಸಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಎನ್‌ಡಿಎ ಮೈತ್ರಿಕೂಟದ ನಾಲ್ವರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಖಾನಾಪಾರ ಪ್ರದೇಶದ ವೆಟರ್ನರಿ ಫೀಲ್ಡ್‌ನಲ್ಲಿ ಬೆಳಿಗ್ಗೆ 11.40ಕ್ಕೆ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಶರ್ಮಾ ಮತ್ತು ಇತರ ನಾಲ್ವರು ಶಾಸಕರಿಗೆ ಪದವಿ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ. 57 ವರ್ಷದ ಹಿಮಂತ ಬಿಸ್ವ ಶರ್ಮಾ ಅವರು ಅಸ್ಸಾಂನಲ್ಲಿ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿ ಜವಾಬ್ದಾರಿ ವಹಿಸಿಕೊಳ್ಳುತ್ತಿರುವ ಮೊದಲ ಕಾಂಗ್ರೆಸ್ಸೇತರ ನಾಯಕರಾಗಿದ್ದಾರೆ.

ಶರ್ಮಾ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿರುವ ನಾಲ್ವರು ಶಾಸಕರೆಂದರೆ ಬಿಜೆಪಿಯ ಅಜಂತಾ ನಿಯೋಗ್ ಮತ್ತು ರಾಮೇಶ್ವರ್ ತೇಲಿ, ಎಜಿಪಿಯ (AGP) ಅತುಲ್ ಬೋರಾ ಮತ್ತು ಬಿಪಿಎಫ್‌ನ (BPF) ಚರಣ್ ಬೋರೋ. ನಿಯೋಗ್, ಬೋರಾ ಮತ್ತು ಬೋರೋ ಅವರು ಶರ್ಮಾ ಅವರ ಮೊದಲ ಸಂಪುಟದ ಸದಸ್ಯರಾಗಿದ್ದರು. ಮಾಜಿ ಕೇಂದ್ರ ಸಚಿವರಾಗಿದ್ದ ರಾಮೇಶ್ವರ್ ತೇಲಿ ಅವರು ರಾಜ್ಯ ರಾಜಕಾರಣಕ್ಕೆ ಮರಳಿದ್ದಾರೆ.

ಇದು ರಾಜ್ಯದಲ್ಲಿ ಮೂರನೇ ಎನ್‌ಡಿಎ ಸರ್ಕಾರವಾಗಲಿದೆ. 2016 ರಲ್ಲಿ ಈಗಿನ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರ ನೇತೃತ್ವದಲ್ಲಿ ಮೈತ್ರಿಕೂಟವು ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿತ್ತು. ಹಿಂದಿನ ಸರ್ಕಾರದಲ್ಲಿ ಅಜಂತಾ ನಿಯೋಗ್ ಹಣಕಾಸು ಸಚಿವರಾಗಿ, ಅತುಲ್ ಬೋರಾ ಕೃಷಿ ಇಲಾಖೆ ಮತ್ತು ಚರಣ್ ಬೋರೋ ಸಾರಿಗೆ ಖಾತೆಯನ್ನು ನಿರ್ವಹಿಸಿದ್ದರು.

ಈ ಪ್ರಮಾಣ ವಚನ ಸಮಾರಂಭದಲ್ಲಿ ಬಿಜೆಪಿಯ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುವಾಹಟಿಯಾದ್ಯಂತ ಭದ್ರತೆಯನ್ನು ಬಲಪಡಿಸಲಾಗಿದ್ದು, ಕೇಂದ್ರ ಮತ್ತು ರಾಜ್ಯ ಪೊಲೀಸರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

126 ಸದಸ್ಯ ಬಲದ ವಿಧಾನಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟವು ದಾಖಲೆಯ 102 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಏಕಾಂಗಿಯಾಗಿ 82 ಕ್ಷೇತ್ರಗಳನ್ನು ಗೆದ್ದಿದ್ದರೆ, ಅದರ ಮಿತ್ರಪಕ್ಷಗಳಾದ ಎಜಿಪಿ ಮತ್ತು ಬಿಪಿಎಫ್ ತಲಾ 10 ಸ್ಥಾನಗಳನ್ನು ಗೆದ್ದಿವೆ.

ಇದನ್ನು ಓದಿ : Mangaluru : ಇಸ್ರೇಲ್‌ಗೆ ತೆರಳುತ್ತಿದ್ದ 42 ವರ್ಷದ ಉಳ್ಳಾಲ ವ್ಯಕ್ತಿ ಆತ್ಮಹತ್ಯೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!