ಮುಜಫರ್ಪುರ, ಜೂನ್ 4 : ದೆಹಲಿಯ ಮಾಳವಿಯಾ ನಗರದ ಹೋಟೆಲ್ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20 ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ ಬಿಹಾರದ ಮುಜಾಫರ್ಪುರದ ಆಸ್ಪತ್ರೆಯೊಂದರಲ್ಲಿ ಈ ದುರಂತ ಸಂಭವಿಸಿದೆ. ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ದಟ್ಟ ಹೊಗೆ ಕಟ್ಟಡದ ಬಹುತೇಕ ಭಾಗಗಳಿಗೆ ಹರಡಿದ್ದು, ಆವರಣದಲ್ಲಿ ತೀವ್ರ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಸುದ್ದಿ ತಿಳಿಯುತ್ತಿದ್ದಂತೆ ತುರ್ತು ಸ್ಪಂದನೆ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಸುಮಾರು 20 ಮಂದಿ ರೋಗಿಗಳನ್ನು ಸುರಕ್ಷಿತವಾಗಿ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಘಟನೆಯಲ್ಲಿ ನಾಲ್ವರು ರೋಗಿಗಳು ಮೃತಪಟ್ಟಿದ್ದು, ಮೃತರನ್ನು ಶಶಾಂಕ್ ಕುಮಾರ್, ಉದಯ್ ಕುಮಾರ್, ಗೀತಾ ದೇವಿ ಮತ್ತು ಬ್ರಜ್ ನಂದ್ ರಾಯ್ ಎಂದು ಗುರುತಿಸಲಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಬೆಂಕಿ ಆಕಸ್ಮಿಕ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಈ ಭೀಕರ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ರೋಗಿಗಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಯ ಕಟ್ಟಡದಿಂದ ಸುರಕ್ಷಿತವಾಗಿ ಹೊರಗೆ ತರಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಸುಬ್ರತ್ ಕುಮಾರ್ ಸೇನ್ ಅವರು, “ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಗಾಯಗೊಂಡ ಇತರ ರೋಗಿಗಳಿಗೆ ತಕ್ಷಣದ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದ್ದಾರೆ.
Read This : Udupi : ಬಾವಿಗೆ ಬಿದ್ದ ಹೆಂಡತಿಯನ್ನು ಕಾಪಾಡಲು ಆಳಕ್ಕೆ ಹಾರಿದ ಗಂಡ; ದಂಪತಿಯನ್ನು ಸಶರೀರ ರಕ್ಷಿಸಿದ ಈಶ್ವರ್ ಮಲ್ಪೆ ಟೀಮ್!



