Tuesday, April 21, 2026
HomeLOCALBiker attacks police personnel in Mangalore :ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಬೈಕ್ ಸವಾರನ...

Biker attacks police personnel in Mangalore :ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಬೈಕ್ ಸವಾರನ ದಾಳಿ: ಮುಖಕ್ಕೆ ಹೊಡೆದು, ₹28,000 ಮೌಲ್ಯದ ಮೊಬೈಲ್ ಪುಡಿಪುಡಿ ಮಾಡಿದ ಪುಂಡ!; ಚಪ್ಪಲಿಯಲ್ಲಿ ಹೊಡೆಯುವುದಾಗಿ ಮಹಿಳೆ ಬೆದರಿಕೆ! POLICE ATTACK

ಮಂಗಳೂರು: ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸರ ಮೇಲೆ ಬೈಕ್ ಸವಾರನ ‘ದರ್ಪ’; ಸಿಬ್ಬಂದಿ ಮೇಲೆ ಹಲ್ಲೆ, ಮೊಬೈಲ್ ಪುಡಿಪುಡಿ!

ಮಂಗಳೂರು: ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ನಂತೂರು ಜಂಕ್ಷನ್‌ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಬೈಕ್ ಸವಾರನೊಬ್ಬ ಹಲ್ಲೆ ನಡೆಸಿರುವ ಘಟನೆ ಏಪ್ರಿಲ್ 18ರಂದು ನಡೆದಿದೆ. ಸಾರ್ವಜನಿಕರ ಮುಂದೆಯೇ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸವಾರ ಈಗ ಸಂಕಷ್ಟಕ್ಕೆ ಸಿಲುಕಿದ್ದಾನೆ.

ಘಟನೆಯ ವಿವರ: ಮಧ್ಯಾಹ್ನ ಸುಮಾರು 12:37ರ ಹೊತ್ತಿಗೆ ನಂತೂರು ಜಂಕ್ಷನ್‌ನಲ್ಲಿ ಸಂಚಾರ ಪೂರ್ವ ಪೊಲೀಸ್ ಠಾಣೆಯ ಹಲೇಷಾ, ಪ್ರವೀಣ್ ಮತ್ತು ಚಂಪಾ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಮಹಿಳೆಯೊಬ್ಬರ ಜೊತೆ ಬಂದ ಸವಾರನು ‘ಫ್ರೀ ಲೆಫ್ಟ್’ (Free Left) ರಸ್ತೆಯಲ್ಲೇ ವಾಹನವನ್ನು ಅಡ್ಡಲಾಗಿ ನಿಲ್ಲಿಸಿದ್ದನು. ಇದನ್ನು ಗಮನಿಸಿದ ಹಲೇಷಾ ಅವರು ಸಂಚಾರಕ್ಕೆ ಅಡಚಣೆಯಾಗುತ್ತಿದೆ, ಬೈಕ್ ಮುಂದಕ್ಕೆ ತೆಗೆಯಿರಿ ಎಂದು ಸೂಚಿಸಿದರು.

ಪೊಲೀಸರ ಮೇಲೆ ಹಲ್ಲೆ, ಬೆದರಿಕೆ: ಪೊಲೀಸರ ಸೂಚನೆಯಿಂದ ಕೆರಳಿದ ಸವಾರನು “ಬೇವರ್ಸಿ”, “ನಾಯಿಗಳು” ಎಂದು ಪೊಲೀಸರನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಇದನ್ನು ಪ್ರಶ್ನಿಸಿದ ಸಿಪಿಸಿ ಪ್ರವೀಣ್ ಅವರ ಮುಖಕ್ಕೆ ಹೊಡೆದು ಗಾಯಗೊಳಿಸಿದ್ದಾನೆ. ಅಷ್ಟಕ್ಕೇ ನಿಲ್ಲದೆ, ಪ್ರವೀಣ್ ಅವರ ಕೈಯಲ್ಲಿದ್ದ ಸುಮಾರು ₹28,000 ಮೌಲ್ಯದ ಮೊಬೈಲ್ ಕಿತ್ತುಕೊಂಡು ನೆಲಕ್ಕೆ ಎಸೆದು ಪುಡಿಪುಡಿ ಮಾಡಿದ್ದಾನೆ. ಜೊತೆಯಲ್ಲಿದ್ದ ಮಹಿಳೆಯು ಕೂಡ ಪೊಲೀಸರಿಗೆ ಚಪ್ಪಲಿಯಲ್ಲಿ ಹೊಡೆಯುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಹಲ್ಲೆಯಿಂದ ಗಾಯಗೊಂಡ ಪ್ರವೀಣ್ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಪಿ ಸವಾರನ ವಿರುದ್ಧ ಮಂಗಳೂರು ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಸಮಾಧಾನಪಡಿಸಲು ಯತ್ನಿಸಿದರೂ ಆರೋಪಿಗಳು ಕಿರುಚಾಟ ನಡೆಸಿ ರಂಪಾಟ ಮಾಡಿದ್ದರು ಎನ್ನಲಾಗಿದೆ.

ಇದನ್ನು ಓದಿ : Udupi : ಹಳೆಯ ಕೆಎಂಎಫ್ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ; ಒಂದು ಗಂಟೆಯ ಕಾರ್ಯಾಚರಣೆಯ ನಂತರ ನಂದಿಸಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!