Homeತಾಜಾ ಸುದ್ದಿKasaragod : ಸ್ಕೂಟರ್ ಮತ್ತು ಬೈಕ್ ನಡುವೆ ಭೀಕರ ಢಿಕ್ಕಿ ; ಓರ್ವ ಸಾವು ,...

Kasaragod : ಸ್ಕೂಟರ್ ಮತ್ತು ಬೈಕ್ ನಡುವೆ ಭೀಕರ ಢಿಕ್ಕಿ ; ಓರ್ವ ಸಾವು , ಇಬ್ಬರಿಗೆ ಗಾಯ

ಕಾಸರಗೋಡಿ : ಕಾಸರಗೋಡಿನಲ್ಲಿ ಸ್ಕೂಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇಂದ್ರೀಯ ವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ್ದು, ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಸೋಮವಾರ ರಾತ್ರಿ ನಡೆದಿದೆ. 

ಭೀಕರ ರಸ್ತೆ ಅಪಘಾತವು ಕಾಸರಗೋಡಿನ ಉಳಿಯತ್ತಡ್ಕ – ಚೌಕಿ ರಸ್ತೆಯ ಆರುಷಾದ್ ನಗರದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸವಾರ, ಆರುಷಾದ್ ನಗರ ನಿವಾಸಿ ಶಹಬಾಸ್ ಹಸನ್ (17) ಎಂಬ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ಶಹಬಾಸ್ ಹಸನ್ ಉದಯಗಿರಿಯಲ್ಲಿರುವ ಕೇಂದ್ರೀಯ ವಿದ್ಯಾಲಯದ (Kendriya Vidyalaya) ವಿದ್ಯಾರ್ಥಿಯಾಗಿದ್ದು, ಈತನ ಅಕಾಲಿಕ ಮರಣ ಇಡೀ ಕುಟುಂಬ ಹಾಗೂ ಸ್ನೇಹಿತರ ವಲಯದಲ್ಲಿ ಕಣ್ಣೀರು ತರಿಸಿದೆ.

ಅಪಘಾತದ ವೇಳೆ ಸ್ಕೂಟರ್‌ನಲ್ಲಿದ್ದ ಮತ್ತೊಬ್ಬ ಸವಾರ ಹಾಗೂ ಬೈಕ್‌ನಲ್ಲಿದ್ದ ಸವಾರ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಭೀಕರತೆಗೆ ಎರಡೂ ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ.

ಘಟನಾ ಸ್ಥಳಕ್ಕೆ ಕಾಸರಗೋಡು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತ ವಿದ್ಯಾರ್ಥಿ ಶಹಬಾಸ್ ಹಸನ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಕಾಸರಗೋಡು ನಗರ ಪೊಲೀಸರು ಈ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು, ಅತಿವೇಗ ಅಥವಾ ಅಜಾಗರೂಕತೆ ಕಾರಣವೇ ಎಂಬ ನಿಟ್ಟಿನಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನು ಓದಿ : Petrol Price Hike : ಒಂದೇ ವಾರದಲ್ಲಿ ಎರಡನೇ ಬಾರಿ ಶಾಕ್ ; ಪೆಟ್ರೋಲ್ 86 ಪೈಸೆ, ಡೀಸೆಲ್ 83 ಪೈಸೆ ಭಾರಿ ಏರಿಕೆ!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments