Home ತಾಜಾ ಸುದ್ದಿ Mamata Banerjee : ದೆಹಲಿ ಗದ್ದುಗೆಯಿಂದ ಬಿಜೆಪಿಯನ್ನು ಕಿತ್ತೆಸೆಯುತ್ತೇವೆ ; ಟಿಎಂಸಿ ಶಾಸಕರ ಸಭೆಯಲ್ಲಿ ಮಮತಾ...

    Mamata Banerjee : ದೆಹಲಿ ಗದ್ದುಗೆಯಿಂದ ಬಿಜೆಪಿಯನ್ನು ಕಿತ್ತೆಸೆಯುತ್ತೇವೆ ; ಟಿಎಂಸಿ ಶಾಸಕರ ಸಭೆಯಲ್ಲಿ ಮಮತಾ ಬ್ಯಾನರ್ಜಿ ವಾಗ್ದಾಳಿ!

    0
    23
    Mamata Banerjee: We will remove BJP from Delhi throne; Mamata Banerjee attacks TMC MLAs' meeting!

    ನವದೆಹಲಿ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (TMC) ನಾಯಕಿ ಮಮತಾ ಬ್ಯಾನರ್ಜಿ ಅವರು ದೆಹಲಿ ಗದ್ದುಗೆಯಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಿತ್ತೆಸೆಯುವುದಾಗಿ ಭೀಕರ ವಾಗ್ದಾಳಿ ನಡೆಸಿದ್ದಾರೆ.

    ಕಾಳಿಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆಯೋಜಿಸಲಾಗಿದ್ದ ಪಕ್ಷದ ಶಾಸಕರ ಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ದೆಹಲಿಯಲ್ಲಿ ಅಧಿಕಾರದಿಂದ ಕೆಳಗಿಳಿಸಲಾಗುವುದು” ಎಂದು ಗುಡುಗಿದ್ದಾರೆ. ಇತ್ತೀಚೆಗೆ ನಡೆದ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ, ಕಳೆದ 15 ವರ್ಷಗಳ ಸುದೀರ್ಘ ಟಿಎಂಸಿ ಆಳ್ವಿಕೆಯನ್ನು ಕೊನೆಗೊಳಿಸಿ ಅಧಿಕಾರ ಹಿಡಿದಿದೆ. ಈ ಚುನಾವಣೆಯಲ್ಲಿ ಟಿಎಂಸಿ ಕೇವಲ 80 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬಂದಿದೆ.

    ಚುನಾವಣಾ ಹಿನ್ನಡೆಯ ಹೊರತಾಗಿಯೂ ಪಕ್ಷ ಬಿಜೆಪಿ ವಿರುದ್ಧ ರಾಜಕೀಯ ಹೋರಾಟ ಮುಂದುವರಿಸುವುದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನುಡಿದರು. “ಅವರು ಏನು ಬೇಕಾದರೂ ಮಾಡಲಿ; ನಮ್ಮ ಮನೆಯನ್ನು ಧ್ವಂಸಗೊಳಿಸಲಿ, ನೋಟಿಸ್ ನೀಡಲಿ.. ಇವುಗಳಿಗೆ ನಾನು ಮಣಿಯುವುದಿಲ್ಲ. ಏನೇ ಬರಲಿ, ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    ಇದೇ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿರುದ್ಧವೂ ಹರಿಹಾಯ್ದ ಮಮತಾ ಬ್ಯಾನರ್ಜಿ, “ನಮ್ಮ ರಾಜ್ಯ ಹಲವು ಮಂದಿ ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೆ ಯಾರೂ ಹಾಲಿ ಮುಖ್ಯಮಂತ್ರಿಯಂತೆ ಇರಲಿಲ್ಲ. ಹಣ ತೆಗೆದುಕೊಳ್ಳುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾದ ವ್ಯಕ್ತಿಯನ್ನು ಸಿಎಂ ಮಾಡಲಾಗಿದೆ” ಎಂದು ಅತ್ಯಂತ ಗಂಭೀರವಾಗಿ ಆರೋಪಿಸಿದ್ದಾರೆ. ಬಂಗಾಳದಲ್ಲಿ ಅಧಿಕಾರ ಕಳೆದುಕೊಂಡರೂ ದೆಹಲಿ ಮಟ್ಟದಲ್ಲಿ ಹೋರಾಟ ತೀವ್ರಗೊಳಿಸಲು ಟಿಎಂಸಿ ಮುಂದಾಗಿದ್ದು, ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ.

    ಇದನ್ನು ಓದಿ : Kolar : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 7 ವರ್ಷದ ಬಾಲಕ ಸೈಯದ್ ರೆಹಮಾನ್ ಮೃತ್ಯು!

    LEAVE A REPLY

    Please enter your comment!
    Please enter your name here

    error: Content is protected !!