Monday, May 11, 2026
HomeLOCALSudeep Shetty suicide case : ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ!

Sudeep Shetty suicide case : ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ!

ಉಡುಪಿ : ಕಾರ್ಕಳದ ಸುದೀಪ್ ಶೆಟ್ಟಿ ಅವರು ಕಳೆದ ಮಾರ್ಚ್ 22ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಈ ಸಾವಿಗೆ ಪತ್ನಿ ಸೌಮ್ಯ ಶೆಟ್ಟಿಯವರೇ ನೇರ ಕಾರಣ ಮತ್ತು ಅವರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಸುದೀಪ್ ಅವರ ತಂದೆ ದಾಮೋದರ್ ಅವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಪೊಲೀಸರು ಸೌಮ್ಯ ಶೆಟ್ಟಿಯನ್ನು ಏಪ್ರಿಲ್ 11ರಂದು ಉಡುಪಿಯಲ್ಲಿ ಬಂಧಿಸಿದ್ದರು.

ಪೊಲೀಸ್ ವಶದಲ್ಲಿದ್ದ ಸೌಮ್ಯ ಶೆಟ್ಟಿ, ಜಾಮೀನಿಗಾಗಿ ಉಡುಪಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸಿದ ನ್ಯಾಯಾಲಯವು, ಆರೋಪದ ಗಂಭೀರತೆಯನ್ನು ಪರಿಗಣಿಸಿ ಜಾಮೀನು ನೀಡಲು ನಿರಾಕರಿಸಿದೆ. ತನಿಖಾಧಿಕಾರಿ ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ಅವರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಅವರು ಜಾಮೀನು ವಿರೋಧಿಸಿ ವಾದಿಸಿದ್ದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!