Saturday, April 4, 2026
HomeLOCALTablet Arif Murder Case : ಮಂಗಳೂರು ನಗರದ ಫ್ಲೈಓವರ್‌ನಲ್ಲಿ ಮಾಜಿ ದರೋಡೆಕೋರನ ಹತ್ಯೆ...

Tablet Arif Murder Case : ಮಂಗಳೂರು ನಗರದ ಫ್ಲೈಓವರ್‌ನಲ್ಲಿ ಮಾಜಿ ದರೋಡೆಕೋರನ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆಶ್ರಯ ಕೋರರನ್ನು ಮಂಗಳೂರು ಪೊಲೀಸರು ಗುರುತಿಸಿದ್ದಾರೆ, ಇನ್ನೂ ಬಂಧನವಾಗಿಲ್ಲ.

ಮಂಗಳೂರು : ಕಳೆದ ವಾರ (ಮಾರ್ಚ್ 27, ಶುಕ್ರವಾರ) ನಡೆದ ಈ ಭೀಕರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ದುಷ್ಕರ್ಮಿಗಳನ್ನು ಪೊಲೀಸರು ಗುರುತಿಸಿದ್ದಾರೆ. ಈ ಕೊಲೆಗೆ ಬಳಸಲಾದ ಕೇರಳ ನೋಂದಣಿಯ ಟೊಯೋಟಾ ಇನ್ನೋವಾ (Innova) ಕಾರನ್ನು ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬುಡೋಲಿ ಎಂಬಲ್ಲಿ ಅನಾಥವಾಗಿ ಬಿಟ್ಟು ಹೋಗಿದ್ದ ಸ್ಥಿತಿಯಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕಾರಿನ ಆಧಾರದ ಮೇಲೆ ಹಂತಕರ ಸುಳಿವು ಪತ್ತೆಹಚ್ಚಲಾಗಿದ್ದು, ಶೀಘ್ರದಲ್ಲೇ ಬಂಧಿಸುವ ಸಾಧ್ಯತೆಯಿದೆ.

ಸೇಡಿನ ಹತ್ಯೆಯ ಶಂಕೆ:

ಮೂಲತಃ ಕುದ್ರೋಳಿ ನಿವಾಸಿಯಾಗಿದ್ದ ಆರಿಫ್, ಪ್ರಸ್ತುತ ತಲಪಾಡಿ ಸಮೀಪದ ಮುಳ್ಳುಗುಡ್ಡೆಯಲ್ಲಿ ವಾಸವಾಗಿದ್ದನು. ಬಂದರ್ ಮತ್ತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈತನ ಮೇಲೆ ಹಲವು ಕ್ರಿಮಿನಲ್ ಪ್ರಕರಣಗಳಿದ್ದವು. ಶುಕ್ರವಾರ ಮುಂಜಾನೆ 3.30 ಗಂಟೆಗೆ ಈತ ತನ್ನ ಬುಲೆಟ್ ಬೈಕ್‌ನಲ್ಲಿ ಮೀನುಗಾರಿಕಾ ಧಕ್ಕೆಯತ್ತ ಹೋಗುತ್ತಿದ್ದಾಗ, ಇನ್ನೋವಾ ಕಾರಿನಲ್ಲಿ ಬಂದ ಹಂತಕರು ಹಿಂಬದಿಯಿಂದ ಡಿಕ್ಕಿ ಹೊಡೆದು ಕೆಳಕ್ಕೆ ಬೀಳಿಸಿದ್ದಾರೆ. ನಂತರ ತಲವಾರ್ ಮತ್ತು ಲಾಂಗ್‌ಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇದು ಹಳೆಯ ಗ್ಯಾಂಗ್ ವಾರ್ ಅಥವಾ ಸೇಡಿನ ಹತ್ಯೆ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ತನಿಖಾ ಪ್ರಗತಿ:

ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳಿಗಾಗಿ ಕೇರಳ ಮತ್ತು ಹೊರ ಜಿಲ್ಲೆಗಳಲ್ಲಿ ಶೋಧ ನಡೆಸಲಾಗುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಫೋರೆನ್ಸಿಕ್ ಪುರಾವೆಗಳ ಆಧಾರದ ಮೇಲೆ ತನಿಖೆ ಚುರುಕುಗೊಂಡಿದೆ. ಕರಾವಳಿ ಪ್ರದೇಶದಲ್ಲಿ ಶಾಂತಿ ನೆಲೆಸಿದ್ದ ಹೊತ್ತಲ್ಲೇ ನಡೆದ ಈ ಘಟನೆಯು ಜನರಲ್ಲಿ ಆತಂಕ ಮೂಡಿಸಿದ್ದು, ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!